ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಗೊಂಡ ನಾರಾಯಣಸ್ವಾಮಿ

20 Feb 2018 4:01 PM | Politics
396 Report

ಬಿಬಿಎಂಪಿ ಕಚೇರಿಗೆ ನುಗ್ಗಿ ಪೆಟ್ರೋಲ್​ ಎರಚಿ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದ ಕಾಂಗ್ರೆಸ್​ ಮುಖಂಡ ನಾರಾಯಣಸ್ವಾಮಿ ಅವರನ್ನು ಬಂಧಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಆದರೆ ಇದೀಗ ಮಾಧ್ಯಮ ವರದಿ ಪ್ರಸಾರವಾದ ನಂತರ ಪರಿಶೀಲಿಸಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ.

ಅಷ್ಟೇ ಅಲ್ಲದೆ ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಅವರನ್ನು ಉಚ್ಚಾಟಿಸಿ ಆದೇಶ ಹೊರಡಿಸಿದ್ದಾರೆ. ಫೆಬ್ರವರಿ 16 ರಂದು ಬಿಬಿಎಂಪಿ ಕಚೇರಿಗೆ ತೆರಳಿ ತಮ್ಮ ದರ್ಪವನ್ನು ಪ್ರದರ್ಶಿಸಿದ್ದರು. ನಾರಾಯಣಸ್ವಾಮಿ ಬಿಬಿಎಂಪಿ ಕಚೇರಿಯಲ್ಲಿ ಗೂಂಡಾಗಿರಿ ನಡೆಸಿದ ವೀಡಿಯೋ ಎಲ್ಲಾ ಸುದ್ದಿವಾಹಿನಿಗಳಲ್ಲಿ ಹರಿದಾಡಿದ್ದು ಈ ವಿಚಾರವಾಗಿ ಅವರದ್ದು ತಪ್ಪು ಎಂದಾದಲ್ಲಿ ಅವರನ್ನು ಬಂಧಿಸುವಂತೆ ಸಿದ್ದರಾಮಯ್ಯ ಸೂಚಿಸಿದ್ದಾರೆ.

Edited By

Shruthi G

Reported By

Madhu shree

Comments