ತಮ್ಮ ಪುತ್ರನ ಅಮಾನುಷ ಕೃತ್ಯಕ್ಕೆ ವಿಧಾನ ಸಭೆಯಲ್ಲಿ ತಲೆ ಬಾಗಿದ ಹ್ಯಾರಿಸ್

20 Feb 2018 6:49 PM | Politics
637 Report

ಕಳೆದ ಶನಿವಾರ ರಾತ್ರಿ ಯುಬಿ ಸಿಟಿಯ ಪಬ್ ಕಮ್ ರೆಸ್ಟೋರೆಂಟ್ ನಲ್ಲಿ ವಿದ್ವತ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹ್ಯಾರಿಸ್ ಅವರ ವಿರುದ್ಧ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ.

ನಿನ್ನೆ ಕಬ್ಬನ್ ಪಾರ್ಕ್ ಪೊಲೀಸರಿಗೆ ಶರಣಾಗಿದ್ದ ಆರೋಪಿ ಮಹಮ್ಮದ್ ನಲಪಾಡ್ ಹ್ಯಾರಿಸ್ ಈಗ ಪೊಲೀಸ್ ವಶದಲ್ಲಿದ್ದಾರೆ.ಘಟನೆಯ ನಂತರ ಆರೋಪಿ ನಲಪಾಡ್ ನನ್ನು ಕಾಂಗ್ರೆಸ್ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದೆ ಯುಬಿ ಸಿಟಿಯ ಪಬ್ ನಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ತಮ್ಮ ಪುತ್ರ ಭಾಗಿಯಾಗಿರುವುದಕ್ಕೆ ಖಚಿತವಾಗಿರುವುದರಿಂದ ಅಲ್ಲದೆ ಹ್ಯಾರಿಸ್ ಪುತ್ರ ತಪ್ಪೊಪ್ಪಿಕೊಂಡಿರುವುದರಿಂದ ಇಂದು ವಿಧಾನ ಸಭೆಯಲ್ಲಿ ಮಾತನಾಡಿದ ಹ್ಯಾರಿಸ್ ತಮ್ಮ ಪುತ್ರ ತಪ್ಪು ಮಾಡಿರುವುದರ ಬಗ್ಗೆ ಸಭೆಯಲ್ಲಿ ಕ್ಷಮೆಯಾಚಿಸಿದ್ದಾರೆ. ಕೆಲವೊಮ್ಮೆ, ಕೆಲ ಕೆಟ್ಟ ಸಂದರ್ಭಗಳಲ್ಲಿ ಇಂತಹ ಘಟನೆಗಳು ಸಂಭವಿಸುತ್ತವೆ. ಈ ಘಟನೆಗಾಗಿ ನಾನು ಸದನ ಮತ್ತು ಸದಸ್ಯರ ಕ್ಷಮೆಯಾಚಿಸುತ್ತೇನೆ ಎಂದು ಹ್ಯಾರಿಸ್ ಅವರು ವಿಧಾನಸಭೆಗೆ ತಿಳಿಸಿದರು.

 

Edited By

Shruthi G

Reported By

Madhu shree

Comments