ಕಾಂಗ್ರೆಸ್ ನಲ್ಲಿ ಮಲ್ಲೇಶ್ವರಂ ಕ್ಷೇತ್ರದ ಟಿಕೆಟ್ ಗಾಗಿ ಕಾದಾಟ
ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷದೊಳಗೆ ಟಿಕೆಟ್ ಗಾಗಿ ಕಾದಾಟಗಳು ಹೆಚ್ಚುತ್ತಲೇ ಇವೆ. ಹಿರಿಯ ಚಿತ್ರ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರು ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ಗಾಗಿ ಪ್ರಯತ್ನ ನಡೆಸಿದ್ದಾರೆ.
ಆದರೆ, ಕಾಂಗ್ರೆಸ್ಸಿನ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್ ಅವರ ಸಹೋದರರೂ ಆಗಿರುವ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ ಅವರು ಕಳೆದ ಬಾರಿ ಸ್ಪರ್ಧಿಸಿ ಸೋಲುಂಡಿದ್ದರು. ಈ ಬಾರಿಯೂ ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಹೀಗಿರುವಾಗ ರಾಕ್ಲೈನ್ ವೆಂಕಟೇಶ್ ಅವರಿಗೆ ಟಿಕೆಟ್ ಸಿಗುತ್ತಾ ಎಂಬುದು ಕುತೂಹಲಕರವಾಗಿದೆ.
Comments