ಕೆಎಸ್​ಆರ್​ಟಿಸಿ ಬಸ್ ಟಿಕೆಟ್​ನಲ್ಲಿ ಮತದಾನ ಜಾಗೃತಿ

21 Apr 2018 5:02 PM | Politics
569 Report

ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಮತದಾನದ ಜಾಗೃತಿಯನ್ನು  ಮೂಡಿಸಲು ವಿಭಿನ್ನ ಪ್ರಯೋಗಗಳನ್ನು ಮಾಡುತ್ತಾರೆ.

ಆದರೆ ಈ ಬಾರಿ ರಾಜ್ಯದ ಜನತೆ ಹಾಗೂ ಸರ್ಕಾರಿ ಬಸ್ ನಲ್ಲಿ ಪ್ರಯಾಣ ಮಾಡುವರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಿದ್ದು, ಟಿಕೆಟ್​ ಮೇಲೆ ಕಡ್ಡಾಯವಾಗಿ ಮತದಾನ ಮಾಡಿ ಎಂಬ ಸಂದೇಶವನ್ನು ಮುದ್ರಿಸಿ ನೀಡುತ್ತಿದೆ.ಇಂದಿನಿಂದ ಕೆ.ಎಸ್.ಆರ್.ಟಿ.ಸಿಯ ಈ ಜಾಗೃತಿ ಅಭಿಯಾನ ಆರಂಭವಾಗಿದ್ದು, ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ನೀಡಲಾಗುವ ಎಲ್ಲಾ ಟಿಕೆಟ್​ಗಳ ಕೆಳಭಾಗದಲ್ಲಿ 'ದಿನಾಂಕ 12.05.2018ರಂದು ಮತದಾನ ಮಾಡುವ ಮೂಲಕ ನಿಮ್ಮ ಹಕ್ಕನ್ನು ಚಲಾಯಿಸಿ ಎಂಬ ಸಂದೇಶ ಪ್ರಕಟಿಸಲಾಗಿದೆ. ನಿಗಮದ ಈ ಕಾರ್ಯಕ್ಕೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗುತ್ತಿದೆ.

 

 

Edited By

Manjula M

Reported By

Manjula M

Comments