ಬಿಎಸ್ ವೈ ಪ್ರಮಾಣ ವಚನ ಸ್ವೀಕಾರ ಹಿನ್ನಲೆ ರಾಹುಲ್ ಗಾಂಧಿ ಹೇಳಿದ್ದೇನು?
ಬಿಎಸ್ ಯಡಿಯೂರಪ್ಪ ಕರ್ನಾಟಕದ 24 ನೇ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದಕ್ಕೆ ಕಾಂಗ್ರೆಸ್ ನಾಯಕರು ಕೆಂಡಾಮಂಡಲರಾಗಿದ್ದಾರೆ.
ಸಂಖ್ಯಾಬಲ ಇಲ್ಲದೇ ಇದ್ದರೂ ಹೊಸ ಸರ್ಕಾರ ರಚಿಸೇ ರಚಿಸುತ್ತೇವೆ ಎಂಬ ಬಿಜೆಪಿಯ ಅತಾರ್ಕಿಕ ನಿಲುವು ಸಂವಿಧಾನವನ್ನು ಅಣಕಿಸುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದರು. ಇಂದು ಬೆಳಗ್ಗೆ ಬಿಜೆಪಿ ತನ್ನ ಠೊಳ್ಳು ಜಯವನ್ನು ಆಚರಿಸುತ್ತಿರುವಾಗ ಭಾರತವು ಪ್ರಜಾಪ್ರಭುತ್ವದ ಸೋಲಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದೆ ಎಂದು ರಾಹುಲ್ ಗಾಂಧಿ ತಮ್ಮ ಟ್ವೀಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.
Comments