ಬಿಜೆಪಿ ಸರ್ಕಾರ ಪತನವಾದ ಮೇಲೆ ಸಿದ್ದರಾಮಯ್ಯ ನವರ ಮೊದಲ ಟ್ವೀಟ್ ನಲ್ಲಿ ಏನಿತ್ತು?
ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಯಡಿಯೂರಪ್ಪ ಅವರು ಇಂದು ನಡೆದ ಅಧಿವೇಶನದಲ್ಲಿ ವಿಶ್ವಾಸಮತ ಯಾಚನೆಯನ್ನು ಮಾಡದೆ ರಾಜೀನಾಮೆ ನೀಡಲು ತೆರಳುತ್ತಿದ್ದಂತೆ ಮಾಜಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರು ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆಯನ್ನು ನೀಡಿದ್ದಾರೆ.
ಬಿಜೆಪಿ ಸರ್ಕಾರ ಪತನವಾದ ಕೂಡಲೇ ಟ್ವೀಟ್ ಮಾಡಿದ ಸಿದ್ದರಾಮಯ್ಯ, 'ಕರ್ನಾಟಕದಲ್ಲಿ ಪ್ರಜಾಪ್ರಭುವುತ್ವ ಗೆಲುವನ್ನು ಸಾಧಿಸಿದೆ.ಸಂವಿಧಾನ ವಿರೋಧಿ ಕ್ರಮಗಳಿಂದ ಅಧಿಕಾರ ಪಡೆಯಲು ಬಿಜೆಪಿ ಮಾಡಿದ ಸಂಚು ವಿಫಲಗೊಂಡಿದೆ' ಎಂದು ಟ್ವೀಟ್ ಮಾಡಿದ್ದಾರೆ.
Comments