ನಾಳೆ ಬಿಜೆಪಿಯಿಂದ ರಾಜ್ಯಾದ್ಯಂತ ಕರಾಳ ದಿನಾಚರಣೆ

22 May 2018 5:42 PM | Politics
408 Report

ಎಚ್.ಡಿ.ಕುಮಾರಸ್ವಾಮಿ ಬುಧವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಮಾರಂಭಕ್ಕೆಕಾರ್ಯಕ್ರಮಕ್ಕೆ ಬಿಜೆಪಿ ಶಾಸಕರು ಗೈರು ಹಾಜರಾಗಲು ನಿರ್ಧರಿಸಿದ್ದಾರೆ.

ಇದೇ ಬೆನ್ನಲ್ಲೇ ನಾಳೆ ರಾಜ್ಯಾದ್ಯಂತ ಕರಾಳ ದಿನ ಆಚರಣೆಗೆ ಬಿಜೆಪಿಯು ನಿರ್ಧರಿಸಿದೆ ಎಂಬುದು ತಿಳಿದು ಬಂದಿದೆ. ನಾಳೆ ರಾಜ್ಯಾದ್ಯಂತ ಬಿಜೆಪಿ ಕರಾಳ ದಿನಾಚರಣೆಯನ್ನು ಆಚರಿಸಲಿದ್ದು, ಬೆಂಗಳೂರಿನಲ್ಲಿ ಬಿಎಸ್ ಯಡಿಯೂರಪ್ಪ ಕರಾಳ ದಿನಾಚರಣೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.ಬುಧವಾರ ಸಂಜೆ 4.30ಕ್ಕೆ ಎಚ್.ಡಿ.ಕೆ ವಿಧಾನಸೌಧದ ಮುಂದೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಕಲ ಸಿದ್ಧತೆಗಳು ಕೂಡ ನಡೆಯುತ್ತಿವೆ.

 

Edited By

Manjula M

Reported By

Manjula M

Comments