ರಾಜ್ಯ ಮೈತ್ರಿ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಬಿ.ಎಸ್.ವೈ..!

04 Jun 2018 9:49 AM | Politics
1268 Report

ರೈತರ ಸಾಲ ಮನ್ನಾ ಮಾಡುವ ಹಿನ್ನಲೆಯಲ್ಲಿ ಸಾಕಷ್ಟು ಹೋರಾಟಗಳನ್ನು ಮಾಡಿ ರಾಜ್ಯದ ಮನಗೆದ್ದಿರುವ ಬಿಎಸ್ ಯಡಿಯೂರಪ್ಪನವರು ಕಾಂಗ್ರೆಸ್, ಜೆಡಿಎಸ್ ಗೆ ಸಖತ್ ಆಗಿರೊ ಸವಾಲನ್ನೆ ಹಾಕಿದ್ದಾರೆ.

ತಾಕತ್ ಇದ್ರೆ, ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬರಲಿ, ಈ ಚುನಾವಣೆಯ ಕ್ಷಣದಲ್ಲೇ ವಿಧಾನಸಭೆ ವಿಸರ್ಜನೆಗೊಂಡರೆ ಬಿಜೆಪಿ 150 ಕ್ಕೂ ಹೆಚ್ಚು ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ ಸವಾಲೆಸೆದರು. ನಗರದಲ್ಲಿ ನಡೆಯುತ್ತಿರುವ ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ. ಎ ನಾರಾಯಣಸ್ವಾಮಿ ಪರ ಮತಯಾಚನೆ ಸಭೆಯ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ ಮುಖಂಡರು ಅತೃಪ್ತಿ, ಅಸಮಾಧಾನ ಹೊರ ಹಾಕುತ್ತಿದ್ದಾರೆ. ಯಾವ ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು ಎಂದು ಸಮ್ಮಿಶ್ರ ಸರ್ಕಾರದ ವಿರುದ್ಧ ಭವಿಷ್ಯವನ್ನು ನುಡಿದ್ದಾರೆ.

 

Edited By

Manjula M

Reported By

Manjula M

Comments