ಕೆಪಿಸಿಸಿ ನೂತನ ಅಧ್ಯಕ್ಷರ ಪ್ರಮಾಣ ವಚನ ಸ್ವೀಕರಿಸಲು ಮೂಹೂರ್ತ ಫಿಕ್ಸ್..!!

07 Jul 2018 3:54 PM | Politics
840 Report

ಭಾರೀ ಕೂತುಹಲ ಮೂಡಿಸಿದ್ದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೆಂಗಳೂರಿನ ಗಾಂಧಿನಗರ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವರಾದ ದಿನೇಶ್ ಗುಂಡೂರಾವ್ ಅವರನ್ನು ನೇಮಕ ಮಾಡಿದ್ದು, ಇದೀಗ ಪ್ರಮಾಣ ವಚನ ಸ್ವೀಕರಿಸಲು ಜುಲೈ 11 ರ ಬೆಳಗ್ಗೆ ಮೂಹೂರ್ತಫಿಕ್ಸ್ ಆಗಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ತ್ರಿಪುರಾ ವಾಸಿನಿಯಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ಕೆಪಿಸಿಸಿಯ ನೂತನ ಕಾರ್ಯಾಧ್ಯಕ್ಷರಾಗಿ ಭಾಲ್ಕಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಈಶ್ವರ್ ಖಂಡ್ರೆ ಕೂಡ ಪದಗ್ರಹಣ ಮಾಡಲಿದ್ದಾರೆ.

Edited By

Shruthi G

Reported By

Shruthi G

Comments