ಬಿಗ್ ಬ್ರೇಕಿಂಗ್ : ಕಾಂಗ್ರೆಸ್ ನ ಈ ಪ್ರಭಾವಿ ವಿಕೆಟ್ ಪತನ..!ಯಾವ ಪಕ್ಷಕ್ಕೆ ಸೇರಲಿದ್ದಾರೆ ಗೊತ್ತಾ?
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿದ್ದು, ತುಮಕೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟರೆ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ ಎಂದು ಮಾಜಿ ಶಾಸಕ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ನಾನು ಸಹ ಪ್ರಬಲ ಆಕಾಂಕ್ಷಿ. ಯಾವುದೇ ಕಾರಣಕ್ಕೂ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಬಾರದು. ಬಿಟ್ಟುಕೊಟ್ಟರೆ, ಪಕ್ಷೇತರನಾಗುವೆ ಎಂದರು.
Comments