Breaking News : ರೋಹಿಣಿಯ ಭ್ರಷ್ಟಾಚಾರದ ಸಮರದಲ್ಲಿ ಸಿಕ್ಕಿ ಬಿದ್ದ ಈ ರಾಜಕೀಯ ಪ್ರಭಾವಿ ನಾಯಕ..!!

26 Jul 2018 2:54 PM | Politics
13140 Report

ಜುಲೈ 4 ರಂದು ಅರಕಲಗೂಡು ತಹಸೀಲ್ದಾರ್ ಪ್ರಸನ್ನಮೂರ್ತಿ ವಿರುದ್ಧ ರಾಜ್ಯ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿರುವ ರೋಹಿಣಿ ಸಿಂಧೂರಿ ಚುನಾವಣಾ ನೀತಿಸಂಹಿತೆ ಜಾರಿಯಲ್ಲಿರುವಾಗ ಸಚಿವರಿಂದ ಬಗರ್ ಹುಕುಂ ಸಾಗುವಳಿ ಫಲಾನುಭವಿಗಳ ಆಯ್ಕೆಯ ವಿಚಾರದಲ್ಲಿ ಅಕ್ರಮವಾಗಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.

ಅಂದು ಸಚಿವರಾಗಿದ್ದ ಎ.ಮಂಜು ಅವರಿಗೆ ಸಹಕಾರ ನೀಡಲು ಸಭೆ ನಡೆಸದೆಯೇ ಸಾವಿರಕ್ಕೂ ಅಧಿಕ ಕಡತಕ್ಕೆ ಸಹಿ ಮಾಡಿದ್ದಾರೆ. ಹಾಗಾಗಿ ಅಧಿಕಾರಿಯನ್ನು ಅಮಾನತು ಮಾಡಬೇಕು ಎಂದಿದ್ದಾರೆ. ಈ ಪ್ರಕರಣ ಮಾಜಿ ಸಚಿವ ಎ. ಮಂಜುಗೆ ಸುತ್ತಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ವಾರದ ಹಿಂದೆಯಷ್ಟೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನೌಕರನನ್ನ ಅಮಾನತುಮಾಡಿ ಓರ್ವ ಅಧಿಕಾರಿ ವಿರುದ್ಧ ಕ್ರಮಕ್ಕೆ ಪತ್ರ ಬರೆದಿದ್ದರು. ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸುತ್ತಿರುವ ರೋಹಿಣಿ ಅವರನ್ನು ವರ್ಗಾವಣೆ ಮಾಡಿ ಸರಕಾರವೇ ಇಕ್ಕಟ್ಟಿಗೆ ಸಿಲುಕಿತ್ತು.

Edited By

Shruthi G

Reported By

Shruthi G

Comments