ಹಬ್ಬದ ಪ್ರಯುಕ್ತ ರಾಜ್ಯದ ಜನತೆಗೆ ಸಿ ಎಂ ಬಂಪರ್ ಕೊಡುಗೆ..!

24 Aug 2018 11:06 AM | Politics
5368 Report

ವಿಕಾಸಸೌಧದಲ್ಲಿ ಗುರುವಾರ ಮಾಧ್ಯಮದವರ ಜತೆ ಮಾತನಾಡಿದ ಸಹಕಾರ ಸಚಿವರಾದ ಬಂಡೆಪ್ಪ ಕಾಶೆಂಪೂರ ಅವರು ಸಾಲಮನ್ನಾದ ಸುಳಿವು ನೀಡಿದ್ದಾರೆ.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲಮನ್ನಾದ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ ಎಂದಿದ್ದಾರೆ. ಈ ವಿಷಯವಾಗಿ ಶೀಘ್ರವೇ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಮೂಲಕ ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರೀಕೃತ ಸಾಲಮನ್ನಾ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಎಂದು ಹೇಳಲಾಗಿದೆ.

Edited By

Manjula M

Reported By

Manjula M

Comments