ಮಾಜಿ ಸಿಎಂ ಸಿದ್ದರಾಮಯ್ಯ ಅವರು ಒಮ್ಮೆಯಾದರು ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದ್ದು ಯಾರಿಗೆ ಗೊತ್ತಾ..?

20 Dec 2018 1:05 PM | Politics
946 Report

ದೋಸ್ತಿ ಸರ್ಕಾರ ಬಂದ ಮೇಲೆ ಕುಮಾರಸ್ವಾಮಿಯವರನ್ನು ಅಧಿಕಾರದಿಂದ ಕೆಳಗಿಳಿಸಲು ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಮೇಲೆ ನಂಬಿಕೆ ಇಟ್ಟವನು ನಾನು. ಸತೀಶ್​ ಜಾರಕಿಹೊಳಿ ಕೂಡ ಇದೇ ನ್ಯಾಯದ ಮೇಲೆ ನಂಬಿಕೆ ಇರುವವರು. ಅವರು ಯಾಕೆ ಸಿಎಂ ಆಗಬಾರದು ಎಂಬ ಮಾತನ್ನಯ ತಿಳಿಸಿದ್ದಾರೆ.

ಬಾದಾಮಿಯಲ್ಲಿ ವಾಲ್ಮೀಕಿ ಸಮುದಾಯದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸತೀಶ್​ ಜಾರಕಿಹೊಳಿ ಪರ ಬ್ಯಾಟ್ ಮಾಡಿದ್ದಾರೆ. ಯಾರು ಕೂಡ ಒಂದೇ ಸ್ಥಾನದಲ್ಲಿ ಇರುವುದಿಲ್ಲ,  ಸಿದ್ದರಾಮಯ್ಯ ಅವರು ಭಾಷಣ ಮಾಡುವಾಗ ಸಭಿಕರು ಸತೀಶ್ ಜಾರಕಿಹೊಳಿ ಸಿಎಂ ಆಗಬೇಕು ಎಂದು ಕೂಗಿ ಹೇಳಿದರು. ಆಗ ಸಭಿಕರ ಮಾತಿಗೆ ಸಹಮತ ಸೂಚಿಸಿದ ಸಿದ್ದರಾಮಯ್ಯ, ಹೌದು ಸತೀಶ್​ ಜಾರಕಿಹೊಳಿ ಒಮ್ಮೆಯಾದರೂ ಸಿಎಂ ಆಗಬೇಕು ಎಂದು ಆ ಸಂದರ್ಭದಲ್ಲಿ ತಿಳಿಸಿದರು.

Edited By

Manjula M

Reported By

Manjula M

Comments