ಬಿಜೆಪಿ ವಿರುದ್ಧ ಅಚ್ಚರಿಯ ಹೇಳಿಕೆ ಸ್ಟಾರ್ ನಟ..!!

02 Mar 2019 5:53 PM | Politics
1382 Report

ಮುಂಬರುವ ಲೋಕಸಭಾ ಚುನಾವಣೆಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದರೆ ಮತ್ತೊಂದು ಕಡೆ ಬಿಜೆಪಿ ಪಕ್ಷವು ಅಚ್ಚರಿಯನ್ನು ಹೇಳಿಕೆಯನ್ನು ನೀಡಿ ಇದೀಗ ಗೊಂದಲಕ್ಕೀಡಾಗಿದೆ… ಲೋಕಸಭಾ ಚುನಾವಣೆಗೂ ಮೊದಲೇ ಯುದ್ಧ ನಡೆಯುತ್ತದೆ ಎಂದು ಬಿಜೆಪಿ ಪಕ್ಷವು ನನಗೆ ಹೇಳಿತ್ತು ಅಂತಾ ನಟ ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ.

ಕಡಪ ಜಿಲ್ಲೆಯಲ್ಲಿ ಪಕ್ಷದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪವನ್ ಕಲ್ಯಾಣ್ ನಾನು ನಿಮಗೆ 2 ವರ್ಷದ ಹಿಂದೆಯೇ ಯುದ್ಧ ನಡೆಯುವ ಬಗ್ಗೆ ಮಾಹಿತಿಯನ್ನು ನೀಡಿದ್ದೆ… ದೇಶದಲ್ಲಿ ಎಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ನೀವೇ ಅರ್ಥ ಮಾಡಿಕೊಳ್ಳಿ ಎಂದು ನಟ ಪವನ್ ಕಲ್ಯಾಣ್ ತಿಳಿಸಿದ್ದಾರೆ. ಪುಲ್ವಾಮಾ ದಾಳಿಯಿಂದ ಭಾರತ-ಪಾಕ್ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿದೆ.. ಹಾಗಾಗಿ ನಾವು ಯಾವುದೇ ಯುದ್ದವನ್ನು ಮಾಡುವ ಅವಶ್ಯಕತೆ ಇಲ್ಲ… ಬಿಜೆಪಿಯವರು ಸಮಯ ನೋಡಿ ಮಾತನಾಡುವವರು ಅವರಿಗಿಂತ ನಾವು ಎಷ್ಟೋ ಮೇಲು ಎಂದು ಪವನ್ ಕಲ್ಯಾಣ್ ತಿಳಿಸಿದರು…

Edited By

Manjula M

Reported By

Manjula M

Comments