ಧೋನಿ, ರಾಯುಡು ಅಬ್ಬರದ ಆಟಕ್ಕೆ ನಡುಗಿದ ಆರ್ ಸಿಬಿ

26 Apr 2018 2:21 PM | Sports
521 Report

ಧೋನಿ ಹಾಗೂ ರಾಯುಡು ಅವರ ಬ್ಯಾಟಿಂಗ್​ನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಐದು ವಿಕೆಟುಗಳ ಭರ್ಜರಿ ಗೆಲುವನ್ನು ಸಾಧಿಸಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಮೊದಲು ಬ್ಯಾಟ್​ ಮಾಡಿದ ಆರ್ ​ಸಿಬಿ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ ನಷ್ಟಕ್ಕೆ 205 ರನ್​ಗಳಿಸುವುದರ ಮೂಲಕ ಸಿಎಸ್ ಕೆ ಗೆಲುವಿಗೆ 206 ರನ್​ಗಳ ಬೃಹತ್​ ಗುರಿಯನ್ನು ನೀಡಿತು. ಬೃಹತ್ ಮೊತ್ತ ಬೆನ್ನತ್ತಿದೆ ಸಿಎಸ್ ಕೆ ಆರಂಭದಲ್ಲೇ ಶೇನ್ ವಾಟ್ಸನ್ (7) ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿತು. ಆದರೆ ಬಳಿಕ ಬಂದ ಅಂಬಾಟಿ ರಾಯುಡು(82) ಹಾಗೂ ಮಹೇಂದ್ರ ಸಿಂಗ್​ ಧೋನಿ(70*) ಅವರ ಆಕರ್ಷಕ ಅರ್ಧ ಶತಕಗಳ ನೆರವಿನೊಂದಿಗೆ ಇನ್ನು 2 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ಗುರಿಯನ್ನು ಮುಟ್ಟಿತ್ತು.

 

Edited By

Manjula M

Reported By

Manjula M

Comments