ಸರಕಾರಕ್ಕೆ ರಾಜ್ಯದ ರೈತರಿಗಿಂತ ತಮಿಳರ ಹಿತರಕ್ಷಣೆಯೇ ಮುಖ್ಯ: ಎಚ್.ಡಿ. ಕೆ ಆಕ್ರೋಶ

25 Jul 2017 2:57 PM |
593 Report

ಕಾವೇರಿ ಜಲಾಶಯಗಳಲ್ಲಿ ನೀರಿನ ಸಂಗ್ರಹದ ಕೊರತೆಯಿದ್ದರೂ ತಮಿಳುನಾಡಿಗೆ ನೀರು ಹರಿದುಬಿಡಲಾಗುತ್ತಿದೆ. ಸರಕಾರಕ್ಕೆ ನಮ್ಮ ರೈತರಿಗಿಂತ ತಮಿಳು ರೈತರ ಹಿತ ಮುಖ್ಯವಾಗಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ನಗರದಲ್ಲಿ ರೈತರು ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಸರಕಾರ ಬರಗಾಲ ಪೀಡಿತ ಪ್ರದೇಶಗಳನ್ನು ನಿರ್ಲಕ್ಷಿಸಿ ಕೇವಲ ರಾಜಕೀಯದಲ್ಲಿ ನಿರತವಾಗಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಬರಗಾಲವಿದ್ದರೂ ಪಕ್ಕದಲ್ಲಿರುವ ನಾಲೆಗಳಿಗೆ ನೀರು ಬಿಡುತ್ತಿಲ್ಲ. ಕೋರ್ಟ್ ಆದೇಶದ ನೆಪವೊಡ್ಡಿ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ. ಇದು ನಮ್ಮ ಸರಕಾರಕ್ಕೆ ಇರುವ ಬದ್ಧತೆ ಎತ್ತಿ ತೋರಿಸುತ್ತದೆ ಎಂದು ಕಿಡಿಕಾರಿದರು.

Edited By

madhu mukesh

Reported By

hdk fans

Comments