ಕಾಂಗ್ರೆಸ್‍ನ ಹಿರಿಯ ಮುಖಂಡರ ವಿಕೆಟ್ ಕೀಳುವ ಬಿಜೆಪಿ ಪ್ಲಾನ್ ಸಕ್ಸೆಸ್ , ಸೇರುವ ಶಾಸಕರ ಪಟ್ಟಿ ಇಂತಿದೆ

23 Oct 2017 12:12 PM |
2853 Report

ಮುಂದಿನ ರಾಜಕೀಯ ಭವಿಷ್ಯ ನೆಲೆ ಕಂಡುಕೊಳ್ಳುವ ದೃಷ್ಟಿಕೋನದ ಕಾರಣ ಬಿಜೆಪಿ ಸೇರಲು ಮುಂದಾಗಿರುವ ಇವರು ಬಿಜೆಪಿ ಪಕ್ಷದ ಉಸ್ತುವಾರಿ ಮುರುಳೀಧರ್ ರಾವ್ ಅವರೊಂದಿಗೆ  ಮಹತ್ವದ ಮಾತುಕತೆ ನಡೆಸಿದ್ದಾರೆ….

ಕಾಂಗ್ರೆಸ್‍ನ ಹಿರಿಯ ಮುಖಂಡ ಹಾಗೂ ಶಾಸಕರಾದ ಎ.ಬಿ.ಮಾಲಕ ರೆಡ್ಡಿ ಹಾಗೂ ಮಾಲಿಕಯ್ಯ ಗುತ್ತೇದಾರ್ ಸದ್ಯದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ ಎಂದು ತಿಳಿದುಬಂದಿದೆ. ಸಂಪುಟ ಪುನಾರಚನೆ ಸಂದರ್ಭದಲ್ಲಿ ಈ ಇಬ್ಬರಿಗೂ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಹೈಕಮಾಂಡ್ ವಿರುದ್ದ ತೀವ್ರ ಅಸಮಾಧಾನಗೊಂಡಿದ್ದರು.

ಎಐಸಿಸಿ ಮುಖಂಡ ಹಾಗೂ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಸದ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಭಾವೀ ಮುಖಂಡರಾಗಿರುವ ಎ.ಬಿ.ಮಾಲಕರೆಡ್ಡಿ ಮತ್ತು ಮಾಲೀಕಯ್ಯ ಗುತ್ತೇದಾರ್ ಅವರು ವೈಯಕ್ತಿಕ ವರ್ಚಸ್ಸು ಹೊಂದಿದ್ದಾರೆ. ಮಾಲಕ ರೆಡ್ಡಿ ಅವರು ಐದು ಬಾರಿ ಶಾಸಕರಾಗಿ ಎಸ್.ಎಂ.ಕೃಷ್ಣ ಅವರ ಆಡಳಿತದಲ್ಲಿ ಸಚಿವರಾಗಿದ್ದರು.ಮಾಲೀಕಯ್ಯ ಗುತ್ತೇದಾರ್ ಅವರು ಆರು ಬಾರಿ ಶಾಸಕರಾಗಿದ್ದರು. ಈ ಇಬ್ಬರಿಗು ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಎರಡನೇ ಬಾರಿ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಇವರನ್ನು ಪರಿಗಣಿಸಿರಲಿಲ್ಲ. ಆಗಲೇ ಇವರು ತಮ್ಮ ಅಸಮಾಧಾನ  ಹೊರಹಾಕಿದ್ದರು.  

ಸಂಪುಟ ಆರೋಗ್ಯ ಸಚಿವ ರಮೇಶ್ ಕುಮಾರ್, ಕಾಂಗ್ರೆಸ್ ಶಾಸಕ ಕೆ ಎನ್ ರಾಜಣ್ಣ, ಮಾಗಡಿ ಕಾಂಗ್ರೆಸ್ ಮುಖಂಡ ಎ ಮಂಜು, ಸುಬ್ಬಾರೆಡ್ಡಿ, ಸುಧಾಕರ ರೆಡ್ಡಿ, ವಿ ಮುನಿಯಪ್ಪ ಹೀಗೆ ದೊಡ್ಡ ಪಟ್ಟಿ ತಯಾರಿಸಿಕೊಂಡಿರುವ ಸಿ ಪಿ ಯೋಗೀಶ್ವರ್, ಬಿಜೆಪಿ ಪರ ಆಪರೇಶನ್ ಕಮಲ ನಡೆಸಲಿದ್ದಾರೆ ಎಂದು ತಿಳಿಸಿವೆ. ರಾಜ್ಯೋತ್ಸವದ ಬಳಿಕ, ಮೈಸೂರು ಭಾಗದಲ್ಲಿ ಆಪರೇಷನ್ ಕಮಲದ ಸದ್ದು ಮೊಳಗುವುದು ನಿಶ್ಚಿತ.

Edited By

Suresh M

Reported By

Admin bjp

Comments