ಕಸಬಾ ಹೋಬಳಿ ಕೊಡಿಗೇಹಳ್ಳಿ, ಬಾಶೆಟ್ಟಿಹಳ್ಳಿ, ಕೆಸ್ತೂರು ಗ್ರಾಮಪಂಚಾಯ್ತಿ ವ್ಯಾಪ್ತಿಯ ಬಿಜೆಪಿ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿದ ಜನಪ್ರಿಯ ಮಾಜಿ ಶಾಸಕರು ಹಾಗೂ ಬಿಜೆಪಿ ಅಭ್ಯರ್ಥಿ ಜೆ.ನರಸಿಂಹಸ್ವಾಮಿ

12 Jan 2018 4:59 PM |
411 Report

ಮಾಜಿ ಶಾಸಕರು ಹಾಗೂ ಬಿಜೆಪಿ ಅಭ್ಯರ್ಥಿ ಜೆ.ನರಸಿಂಹಸ್ವಾಮಿ ನೆರೆದಿದ್ದ ಕಾರ್ಯಕರ್ತರು, ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುತ್ತಾ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು, ಜನವರಿ 16 ರಂದು ದೊಡ್ಡಬಳ್ಳಾಪುರ ತಾಲ್ಲೂಕಿಗೆ ಯಡಿಯೂರಪ್ಪ ನೇತೃತ್ವದ "ಪರಿವರ್ತನಾ ಯಾತ್ರೆ" ಆಗಮಿಸಲಿದ್ದು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕಾರ್ಯಕರ್ತರು ಶ್ರಮಿಸಬೇಕೇಂದು ತಿಳಿಸಿ, ಬಿಜೆಪಿ ಪಕ್ಷದ ಪರವಾಗಿ ಮತಯಾಚಿಸಿದರು.

ಬೆಂ.ಗ್ರಾ. ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವತ್ಸಲಾ ಪರಿವರ್ತನಾ ಯಾತ್ರೆ ಕುರಿತು ವಿವರಿಸಿ, ಬಹಿರಂಗ ಸಭೆಗೆ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಕೇಳಿಕೊಂಡರು, ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರಾದ ಲಕ್ಷ್ಮಿನಾರಾಯಣ್, ಹನುಮಂತೇಗೌಡ, ಅಶ್ವಥ್ ನಾರಾಯಣ್, ಶ್ರೀಮತಿ ಪುಷ್ಪ ಶಿವಶಂಕರ್ ಮತ್ತು ಕೊಡಿಗೇಹಳ್ಳಿ, ಬಾಶೆಟ್ಟಿಹಳ್ಳಿ, ಅರೇಹಳ್ಳಿ ಗುಡ್ಡದಹಳ್ಳಿ, ಕೆಸ್ತೂರು ವಿಭಾಗದ ಎಲ್ಲ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು .

Edited By

Ramesh

Reported By

Ramesh

Comments