ಇಸ್ರೋ ಅಧ್ಯಕ್ಷ ಡಾ.ಎ.ಎಸ್.ಕಿರಣ್ ಕುಮಾರ್ ರವರಿಂದ ಚಿನ್ನದ ಪದಕ-ಪ್ರಮಾಣ ಪತ್ರ ನೀಡಿಕೆ

10 Feb 2018 4:24 PM |
496 Report

ದೊಡ್ಡಬಳ್ಳಾಪುರ ನಗರದ ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ(ಆರ್.ಎಲ್.ಜಾಲಪ್ಪ ಪದವಿ ಕಾಲೇಜು)ದ ಬಿ.ಕಾಂ ವಿದ್ಯಾರ್ಥಿಗಳಾದ ವಿ.ಪಾರ್ವತಿ ಮತ್ತು ಎಸ್.ರಜನಿ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದ 53ನೇ ಘಟಿಕೋತ್ಸವ ಸಮಾರಂಭದಲ್ಲಿ ಇಸ್ರೋ ಅಧ್ಯಕ್ಷ ಡಾ.ಎ.ಎಸ್.ಕಿರಣ್ ಕುಮಾರ್ ಅವರು ಚಿನ್ನದ ಪದಕ-ಪ್ರಮಾಣ ಪತ್ರ ನೀಡಿ ಅಭಿನಂದಿಸಿದರು. ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ ಈ ಮಕ್ಕಳ ಸಾಧನೆ ಇತರೆ ಎಲ್ಲ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಲಿ ಎಂದು ಆಡಳಿತ ಮಂಡಲಿ, ಪ್ರಾಂಶುಪಾಲರು, ಬೋಧಕ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Edited By

Ramesh

Reported By

Ramesh

Comments