ಪ್ರಜ್ವಲ್ ರೇವಣ್ಣ ಚುನಾವಣಾ ಅಖಾಡಕ್ಕಿಳಿಯುವ ಬಗ್ಗೆ ಸುಳಿವು ಕೊಟ್ಟ ದೇವೇಗೌಡ್ರು..!!

25 Feb 2018 5:44 PM |
5139 Report

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣರಿಗೆ ಟಿಕೆಟ್ ನೀಡುವ ವಿಚಾರವಾಗಿ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಲೇ ಇರುತ್ತದೆ. ಇದೀಗ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಈ ಬಗ್ಗೆ ಮಾತನಾಡಿದ್ದು, ಪ್ರಜ್ವಲ್ ರಾಜಕೀಯ ಪ್ರವೇಶ ಕುರಿತು ಏನು ಹೇಳಿದ್ದಾರೆ ಗೊತ್ತಾ?

ಪ್ರಜ್ವಲ್ ರೇವಣ್ಣ ಟಿಕೆಟ್ ನೀಡಬೇಕು ಅನ್ನೋ ಒತ್ತಡ ಇದೆ. ಎಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಪಾರ್ಟಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ. ಮೊದಲಿನಿಂದಲೂ ಕುಮಾರಸ್ವಾಮಿ ಮತ್ತು ರೇವಣ್ಣ ಚುನಾವಣೆಗೆ ನಿಲ್ಲಬೇಕು ಅನ್ನೊ ತೀರ್ಮಾನವಾಗಿತ್ತು. ಪ್ರಜ್ವಲ್ ನಿಲ್ಲಬೇಕು ಎಂಬ ಭಾವನೆಯೂ ಇದೆ. ಇದನ್ನ ಚರ್ಚಿಸುವವರೂ ಇದ್ದಾರೆ. ಮುಂಬೈ ಕರ್ನಾಟಕದಲ್ಲಿ ಬೃಹತ್ ರೈತ ಸಮಾವೇಶ, ರಾಯಚೂರು ಭಾಗದಲ್ಲಿ ಅಲ್ಪಸಂಖ್ಯಾತರ ಸಮಾವೇಶ ನಡೆಸಲಿದ್ದೇವೆ. ಮೊದಲ ಪಟ್ಟಿಯಲ್ಲಿ ಮೂರು ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳು ಬದಲಾಗುವ ಸಾಧ್ಯತೆ ಇದೆ. ಆ ಕ್ಷೇತ್ರಗಳ ಎಲ್ಲ ಆಕಾಂಕ್ಷಿಗಳನ್ನು ಕೂರಿಸಿ, ಮನವೊಲಿಸಿ, ಅಭ್ಯರ್ಥಿಗಳನ್ನ ಅಂತಿಮ ಗೊಳಿಸಲಾಗುತ್ತದೆ,' ಎಂದು ಸ್ಪಷ್ಟಪಡಿಸಿದ್ದಾರೆ.

ನನ್ನನ್ನ ರಾಮಕೃಷ್ಣ ಹೆಗ್ಡೆ ಬೆಳೆಸಿದ್ದು ಅನ್ನೋ ಸಿಎಂ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ದೇವೇಗೌಡರು, ' ಅವರು ದೊಡ್ಡ ವ್ಯಕ್ತಿಗಳು. ಅವರು ಹೇಳಿದ್ದೆಲ್ಲಾ ಸತ್ಯ ಅಲ್ಲವೇ? ಅವರು ಸತ್ಯವನ್ನೇ ಹೇಳುವುದಾಗಿ ಸಂವಿಧಾನದ ಮೇಲೆ ಪ್ರಮಾಣವಚನ ಮಾಡಿದ್ದಾರೆ. ಅಂಥವರ ಬಗ್ಗೆ ಮಾತನಾಡುವಂತಿಲ್ಲ,' ಎಂದು ಮಾರ್ಮಿಕವಾಗಿ ಟಾಂಗ್ ನೀಡಿದರು.

 

Edited By

Shruthi G

Reported By

hdk fans

Comments