ರಾಮನಗರ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಜೆಡಿಎಸ್ ದಳಪತಿ..!!

02 Mar 2018 9:35 AM |
13009 Report

ರೇಷ್ಮೆಗೆ ಪ್ರಸಿದ್ಧಿ ಹೊಂದಿರುವ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕಾರಣ ಮಾತ್ರ ರೇಷ್ಮೆಯಾಗಿಲ್ಲ. ಯುದ್ಧದಂತೆ ಇದೆ. ರಾಜ್ಯಕ್ಕೆ ಮೂವರು ಮುಖ್ಯಮಂತ್ರಿಗಳನ್ನು ನೀಡಿದ ಕೀರ್ತಿ ಈ ಕ್ಷೇತ್ರಕ್ಕೆ ಇದೆ. ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ, ಎಚ್.ಡಿ. ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ಈ ಕ್ಷೇತ್ರದಿಂದ ಆಯ್ಕೆಯಾಗಿ ಮುಖ್ಯಮಂತ್ರಿಗಳಾಗಿದ್ದಾರೆ. ಹಾಲಿ ಶಾಸಕರಾಗಿರುವ ಎಚ್.ಡಿ. ಕುಮಾರಸ್ವಾಮಿ ಸತತ ಮೂರು ಬಾರಿ ಇಲ್ಲಿಂದ ಗೆದ್ದಿದ್ದಾರೆ.

ಈ ಕ್ಷೇತ್ರ ಜೆಡಿಎಸ್ ನ ಭದ್ರಕೋಟೆಯಾಗಿದೆ. 2013ರಲ್ಲಿ ನಡೆದ  ಆದರೆ, ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಎಚ್.ಡಿ. ಕುಮಾರಸ್ವಾಮಿ 83,447 ಮತಗಳನ್ನು ಗಳಿಸಿ ಜಯಗಳಿಸಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಮರಿದೇವರು 58,049 ಮತಗಳನ್ನು ಗಳಿಸಿ ಸೋಲು ಕಂಡಿದ್ದರು. ಈ ಕ್ಷೇತ್ರದಲ್ಲಿ ಕುಮಾರಸ್ವಾಮಿ ಅವರಿಗೆ ಸವಾಲು ಒಡ್ಡುವಂತಹ ಸಮರ್ಥ ಅಭ್ಯರ್ಥಿ ಯಾರು ಇಲ್ಲ.ಇತ್ತ ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ. ಮತದಾರರು ಕ್ಷೇತ್ರದಲ್ಲಿ ಕುಮಾರಸ್ವಾಮಿಗೆ ಜೈ ಎನ್ನುತ್ತಿರುವುದು ಎಲ್ಲೆಡೆ ಕಂಡು ಬರುತ್ತಿದೆ.ಈ ಬಾರಿ ರಾಮನಗರ ವಿಧಾನಸಭಾ ಕ್ಷೇತ್ರವನ್ನು ಬಹಳ ಸರಳ ಬಹುಮತದಿಂದ ವಶಕ್ಕೆ ಪಡೆಯಲಿದೆ ಎಂದು ಮೂಲಗಳು ತಿಳಿಸಿವೆ.



Edited By

Shruthi G

Reported By

hdk fans

Comments