ಬೊಮ್ಮನಹಳ್ಳಿಯಲ್ಲಿ ಬಿಜೆಪಿ ಗೆಲುವಿಗೆ ಬ್ರೇಕ್ ಹಾಕಲಿರುವ ಜೆಡಿಎಸ್..!!

06 Mar 2018 12:59 PM |
9814 Report

ಅತಿ ಹೆಚ್ಚು ಮತದಾರರನ್ನು ಹೊಂದಿರುವ ಎರಡನೆ ಅತಿದೊಡ್ಡ ವಿಧಾನಸಭಾ ಕ್ಷೇತ್ರವಾಗಿರುವ ಬೊಮ್ಮನಹಳ್ಳಿ ಕ್ಷೇತ್ರದಲ್ಲೀಗ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ. ಕಳೆದ 2013ರ ಚುನಾವಣೆಯಲ್ಲಿ 2.10 ಲಕ್ಷದಷ್ಟಿದ್ದ ಮತದಾರರು ಈಗ ದುಪ್ಪಟ್ಟಾಗಿದ್ದಾರೆ. ಈ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿತ್ತು, ಆದರೆ ಇದೀಗ ಜೆಡಿಎಸ್ ನ ಕೈ ವಶವಾಗಿದೆ.

ಇನ್ನು 2008ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಬಲ ಪೈಪೋಟಿ ನೀಡಿದ್ದ ಕುಪೇಂದ್ರರೆಡ್ಡಿ ಅವರು ಈಗ ಜೆಡಿಎಸ್‍ನಲ್ಲಿದ್ದಾರೆ. ಈ ಕ್ಷೇತ್ರಲ್ಲಿ ನೂರಕ್ಕೆ ನೂರು ಜೆಡಿಎಸ್ ಗೆ ಗೆಲುವು ಖಚಿತ ಎಂದು ಮೂಲಗಳು ತಿಳಿಸಿವೆ. ಕಳೆದ ಬಾರಿ ಶರದ್‍ಚಂದ್ರ ಬಾಬು ಎಂಬುವವರು ಜೆಡಿಎಸ್‍ನಿಂದ ಸ್ಪರ್ಧಿಸಿ 12 ಸಾವಿರ ಮತ ಪಡೆದಿದ್ದರು. ಸತೀಶ್‍ರೆಡ್ಡಿ ಗೆಲುವಿಗೆ ಕಡಿವಾಣ ಹಾಕಲು ಜೆಡಿಎಸ್ ತಂತ್ರ ರೂಪಿಸುತ್ತಿದೆ. ಬಿಜೆಪಿಯನ್ನು ಮಣಿಸಿ ಈ ಕ್ಷೇತ್ರವನ್ನು ತಮ್ಮ ವಶಕ್ಕೆ ಪಡೆಯಬೇಕೆಂದು ಜೆಡಿಎಸ್ ಹವಣಿಸುತ್ತಿದೆ. ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಪ್ರಯತ್ನ ಮುಂದುವರಿಸಿದೆ. ಜೆಡಿಎಸ್ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಚಿಂತನೆ ನಡೆಸುತ್ತಿವೆ. ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ಚುನಾವಣಾ ಕದನ ರಂಗೇರುವುದರಲ್ಲಿ ಅನುಮಾನವಿಲ್ಲ. 

Edited By

Shruthi G

Reported By

hdk fans

Comments