ಸಿಎಂ ಸಿದ್ದರಾಮಯ್ಯ ಗೆ ತುಮಕೂರಿನಲ್ಲಿ ಟಾಂಗ್ ಕೊಟ್ಟ ಎಚ್ ಡಿಕೆ

10 Mar 2018 4:11 PM |
612 Report

ಸಿದ್ದರಾಮಯ್ಯ ಇರುವುದೇ ಈ ರಾಜ್ಯವನ್ನು ಲೂಟಿ ಮಾಡಲು ಎನ್ನುವುದು ಅಂಕಿ ಅಂಶಗಳಿಂದ ಈಗಾಗಲೇ ಸಾಬೀತಾಗಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ದುರ್ಬಲವಾಗಿರುವ ಬಗ್ಗೆ ಇಂಗ್ಲೀಷ್ ನಿಯತಕಾಲಿಕೆಯೊಂದು ಬಹಿರಂಗ ಮಾಡಿದೆ. ರಾಜ್ಯದ ಬೊಕ್ಕಸವನ್ನು ದಿವಾಳಿ ಮಾಡಿ ಹೋಗುತ್ತಿದ್ದಾರೆ. ಸಿದ್ದರಾಮಯಯ್ಯನವರ ದುರಹಂಕಾರ, ಗರ್ವ, ದುಡ್ಡಿನ ಮದ ಅವರನ್ನ ಈ ರೀತಿ ಮಾತನಾಡಿಸುತ್ತಿದೆ ಎಂದು ಹೇಳಿದ್ದಾರೆ.

ಡೀಲ್ ಮಾಡುವುದನ್ನು ಕುಮಾರಸ್ವಾಮಿಯಿಂದ ಕಲಿಯಬೇಕಾಗಿಲ್ಲ ಎಂದು ಹೇಳಿದ ಸಿಎಂ ಸಿದ್ದರಾಮಯ್ಯರಿಗೆ ಎಚ್'ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಅಧಿಕಾರಿಗಳ ಜೊತೆ ಡೀಲ್ ಮಾಡಿಕೊಳ್ಳುವುದು ಸಿದ್ದರಾಮಯ್ಯರಿಗೆ ಕರಗತ ಎಂದು ತುಮಕೂರಿನಲ್ಲಿ ತಿರುಗೇಟು ನೀಡಿದ್ದಾರೆ. ನಾವು ಡೀಲ್ ಮಾಡುವ ಜಾಯಮಾನದಲ್ಲಿ ಬಂದಿಲ್ಲ. ಅಧಿಕಾರಿಗಳ ಜೊತೆ ಮಾಡುವ ಡೀಲ್ ಹೇಗೆ ಮಾಡಬೇಕು, ಕಿಕ್ ಬ್ಯಾಕ್ ವ್ಯವಹಾರದಲ್ಲಿ ಹೇಗೆ ರುಜು ಹಾಕಿಸಿಕೊಳ್ಳಬೇಕು ಎನ್ನುವುದರಲ್ಲಿ ಸಿದ್ದರಾಮಯ್ಯ ಪರಿಣತಿ ಹೊಂದಿದ್ದಾರೆ ಎಂದು ವಾಕ್ ಪ್ರಹಾರ ನಡೆಸಿದರು. ಅಲ್ಲದೇ ನಾನು ಸಿದ್ದರಾಮಯ್ಯ ಅವರಿಗೆ ಪಾಠ ಹೇಳುವಷ್ಟು

 

Edited By

hdk fans

Reported By

hdk fans

Comments