ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಪಕ್ಷದ ಅಭ್ಯಥಿಗಳನ್ನು ಘೋಷಿಸಿದ ದೇವೇಗೌಡರು

11 Mar 2018 12:01 PM |
760 Report

ರಾಜ್ಯದಲ್ಲಿ ಜೋನ್​ ತಿಂಗಳಿನಲ್ಲಿ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ಜೆಡಿಎಸ್​ ಪಕ್ಷದಿಂದ ಅಭ್ಯರ್ಥಿಗಳನ್ನು ಜೆಡಿಎಸ್​ ವರಿಷ್ಟ ಎಚ್.​ಡಿ.ದೇವೇಗೌಡರು ಬಿಡುಗಡೆ ಮಾಡಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಈಶಾನ್ಯಾ ಪದವೀಧರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರದ ಅವಧಿ ಜೋನ್​ಗೆ ಮುಕ್ತಾಯವಾಗಲಿದ್ದೂ ಈ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಜೆಡಿಎಸ್​ ಘೋಷಿಸುವ ಮೂಲಕ ಈಗಿನಿಂದಲೇ ಅಖಾಡಕ್ಕೆ ಇಳಿಯುವಂತೆ ಸೂಚನೆ ನೀಡಿದ್ದಾರೆ.

ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳಾಗಿ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮರಿತಿಬ್ಬೆಗೌಡ, ಆಗ್ನೆಯ ಶಿಕ್ಷಕರ ಕ್ಷೇತ್ರದಲ್ಲಿ ಹಾಲಿ ಶಾಸಕರಾಗಿರುವ ರಮೇಶ್​ ಬಾಬು, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್​.ಎಲ್​.ಬೋಜೇಗೌಡ ಅವರನ್ನು ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಎಲ್​.ಆರ್​.ಶಿವರಾಮೇಗೌಡ, ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಎನ್​ ಪ್ರತಾಪ್​ ರೆಡ್ಡಿ, ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಅಶ್ವಿನ್​ ಪೆರಾರ ಅವರನ್ನು ಅಭ್ಯರ್ಥಿಗಳೆಂದು ದೇವೇಗೌಡರು ಘೋಷಿಸಿದ್ದು ಈಗಿನಿಂದಲೇ ಪ್ರಚಾರ ಕಾರ್ಯ ಆರಂಭಿಸುವಂತೆ ಸೂಚಿಸಿದ್ದಾರೆ.

Edited By

Shruthi G

Reported By

hdk fans

Comments