ಬಿಜೆಪಿ ಯ ಮತ್ತೊಂದು ಪ್ರಭಾವಿ ವಿಕೆಟ್ ಜೆಡಿಎಸ್ ತೆಕ್ಕೆಗೆ...!!

09 Apr 2018 4:05 PM |
27381 Report

ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಆರ್. ಆರ್. ನಗರ ಕ್ಷೇತ್ರದಲ್ಲಿ ರಾಜಕೀಯದ ಕಾವು ಹೆಚ್ಚುತ್ತಿದೆ. ಅನ್ಯ ಪಕ್ಷಗಳು ಜೆಡಿಎಸ್ ನತ್ತ ಮುಖ ಮಾಡುತ್ತಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯ ಸಲುವಾಗಿ ಬಿಜೆಪಿ ಬಿಡುಗಡೆ ಮಾಡಿರುವ ಮೊದಲ ಪಟ್ಟಿಯಲ್ಲಿ ತಮ್ಮ ಹೆಸರು ಇರದೇ ಇರುವ ಕಾರಣಕ್ಕಾಗಿ ಆರ್.ಆರ್ ನಗರದ ಮಾಜಿ ಕಾರ್ಪೊರೇಟರ್ ಹಾಗೂ ಚಿತ್ರ ನಟಿ ಅಮೂಲ್ಯ ಅವರ ಮಾವ ರಾಮಚಂದ್ರ ಅವರು ಬಿಜೆಪಿ ತೊರೆದು ಜೆಡಿಎಸ್ ಸೇರಲಿದ್ದಾರೆ ಎನ್ನಲಾಗಿದೆ.

ಈಗಾಗಲೇ ಮೂರು ಬಾರಿ ಟಿಕೆಟ್ ಸಿಗದೆ ವಂಚಿತರಾಗಿದ್ದ‌ ಕಾರಣ ಜೆಡಿಎಸ್‌ಗೆ ಪಕ್ಷ ಸೇರುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗುತ್ತಿದೆ. ಈ ವಿಚಾರವಾಗಿ ಇಂದು ಆರ್.ಆರ್.ನಗರದ ತಮ್ಮ ನಿವಾಸದಲ್ಲಿ ಸಂಜೆ 5 ಗಂಟೆಗೆ ಸುದ್ಧಿಗೋಷ್ಠಿಯಲ್ಲಿ ತಮ್ಮ ಮುಂದಿನ ರಾಜಕೀಯ ನಿರ್ಧಾರವನ್ನು ತಿಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Edited By

Shruthi G

Reported By

hdk fans

Comments