ಚುನಾವಣಾ ಸ್ಪರ್ಧೆ ಬಗ್ಗೆ ಸಿದ್ದರಾಮಯ್ಯ ಗೆ ಟಾಂಗ್ ಕೊಟ್ಟ ಜೆಡಿಎಸ್ ದಳಪತಿ

11 Apr 2018 6:10 PM |
2704 Report

ಯಲಬುರ್ಗಾ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ವಿಕಾಸ ಪರ್ವ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು, ಸಿದ್ದರಾಮಯ್ಯ ಸ್ಪರ್ಧಿಸಲು ಈಗ ಎರಡನೇ ಕ್ಷೇತ್ರವನ್ನು ಹುಡುಕುತ್ತಿದ್ದಾರೆ. ಬೇಕಾದರೆ ಚನ್ನಪಟ್ಟಣದಲ್ಲಿ ಸ್ಪರ್ಧಿಸಲಿ ಎಂದು ಟಾಂಗ್ ನೀಡಿದ್ದಾರೆ.

ಚನ್ನಪಟ್ಟಣದಲ್ಲಿ ಹೆಚ್.ಎಂ.ರೇವಣ್ಣ ಅಲ್ಲ ರಾಹುಲ್‍ ಗಾಂಧಿ ಅಥವಾ ಸಿದ್ದರಾಮಯ್ಯ ಬೇಕಾದರೂ ಸ್ಪರ್ಧಿಸಲಿ. ಸಿದ್ದರಾಮಯ್ಯ ಚನ್ನಪಟ್ಟಣದಲ್ಲಿ ಯೋಗೇಶ್ವರ್‌ನನ್ನ ಕಟ್ಟಿಹಾಕೋದಕ್ಕೆ ರೇವಣ್ಣನ್ನ ಕಣಕ್ಕೆ ಇಳಿಸುತ್ತಿಲ್ಲ. ಬದಲಾಗಿ ನನ್ನನ್ನು ಕಟ್ಟಿಹಾಕುವ ಯೋಚನೆ ಅವರದು. ಹೇಗೂ ಸಿದ್ದರಾಮಯ್ಯ ಅವರು ಎರಡನೇ ಕ್ಷೇತ್ರವನ್ನು ಹುಡುಕುತ್ತಿದ್ದಾರೆ. ಅವರೇ ಬಂದು ಅಲ್ಲಿ ಸ್ಪರ್ಧಿಸಲಿ ಎಂದರು. ಬಿ.ಎಸ್.ಯಡಿಯೂರಪ್ಪ ಅವರಿಗೆ ಈಗ ರೈತರ ಬಗ್ಗೆ ಕಾಳಜಿ ಬಂದಿದೆ ಎಂದು ಅನಿಸುತ್ತೆ. ಯಾಕಂದ್ರೆ ಕಳೆದ ಎರಡು ದಿನಗಳಿಂದ ಅವರ ಪ್ರತಿಕ್ರಿಯೆಗಳನ್ನು ನಾನು ಗಮನಿಸುತ್ತಿದ್ದೇನೆ. ನಿನ್ನೆ ಗಂಗಾವತಿಯಲ್ಲಿ ಭತ್ತ ಬೆಳೆವ ರೈತರೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಬಂದಾಗ ಅವರು ನೀಡಿರುವ ಹೇಳಿಕೆಯನ್ನು ನೋಡಿದರೆ ಈಗ ಅವರಿಗೆ ರೈತರ ಬಗ್ಗೆ ಕಾಳಜಿ ಮೂಡಿದಂತಿದೆ. ಇಷ್ಟು ದಿನ ಎಲ್ಲಿ ಹೋಗಿತ್ತು? ಅಚ್ಚುಕಟ್ಟು ಪ್ರದೇಶದ ರೈತರ ಸಂಕಷ್ಟ ಅರಿತುಕೊಂಡು ನಾನು ತಿಂಗಳ ಹಿಂದೆಯೇ ತುಂಗಭದ್ರಾ ಜಲಾಶಯದ ನೀರಾವರಿ ನಿರ್ವಹಣಾ ಸಮಿತಿ ಸದಸ್ಯರನ್ನು ಹಾಗೂ ಅಧಿಕಾರಿಗಳೊಂದಿಗೆ ಮಾತನಾಡಿದ್ದೆ ಎಂದರು. ಇನ್ನು ಪ್ರಜ್ವಲ್ ರೇವಣ್ಣ ಅವರಿಗೆ ಟಿಕೇಟ್ ವಿಚಾರಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರು ಅಸಮಾಧಾನಗೊಂಡಿಲ್ಲ. ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಬೇಕಿದೆ. ಇದರಲ್ಲಿ ಇನ್ನುಳಿದ ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಮಾಡಲಾಗುವುದು. ಇಕ್ಬಾಲ್ ಅನ್ಸಾರಿ ಅವರಿಗೆ ದೇವೇಗೌಡರ ಆಡಳಿತದ ಬಗ್ಗೆ ಏನು ಗೊತ್ತು? ಸಿದ್ದರಾಮಯ್ಯ ದೇವೇಗೌಡರ ಬಳಿ ಕಲಿತಿದ್ದಾರೆ. ಇಕ್ಬಾಲ್ ಅನ್ಸಾರಿ ಮಂತ್ರಿಯಾಗುವಾಗ ದೇವೇಗೌಡರ, ಕುಮಾರಸ್ವಾಮಿ ಅವರ ಹೆಸರು ಹೇಳಿದರೋ ಅಥವಾ ಸಿದ್ದರಾಮಯ್ಯ ಹೆಸರು ಹೇಳಿದರೋ ಎಂಬುದನ್ನು ನೆನಪು ಮಾಡಿಕೊಳ್ಳಲಿ. ಈಗ ಅವರು ಏನು ಬೇಕಾದರೂ ಮಾತನಾಡುತ್ತಾರೆ ಎಂದು ಹೇಳಿದರು. ಅಲ್ಲದೆ, ಕೊಪ್ಪಳ ಸಂಸದ ಸಂಗಣ್ಣ ಕರಡಿ ನಮ್ಮ ಜೊತೆಗೆ ಈ ಕ್ಷಣದವರೆಗೂ ಸಂಪರ್ಕದಲ್ಲಿ ಇಲ್ಲ ಎಂದು ಕುಮಾರಸ್ವಾಮಿ ಸ್ವಷ್ಟಪಡಿಸಿದರು.

Edited By

Shruthi G

Reported By

hdk fans

Comments