ಬ್ರೇಕಿಂಗ್ ನ್ಯೂಸ್ : ‘ಕೈ’ ಪಕ್ಷಕ್ಕೆ ಬಿಗ್ ಶಾಕ್, ಅಂಬಿ ಪರಮಾಪ್ತ ಜೆಡಿಎಸ್ ಗೆ ಸೇರ್ಪಡೆ...!

11 May 2018 9:29 PM |
9447 Report

ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಶುರುವಾಗಿದ್ದು, ಇನ್ನೂ ಕೂಡ ಪಕ್ಷಾಂತರ ಪರ್ವವು ನಡೆಯುತ್ತಿದೆ. ಮಂಡ್ಯದಲ್ಲಿ ರಾಜಕೀಯದ ಕಾವು ಕ್ಷಣಕ್ಷಣಕ್ಕೂ ಹೆಚ್ಚುತ್ತಿದೆ. ಇದೀಗ ರಾಜಕೀಯ ವಲಯದಲ್ಲಿ ಹೊಸದೊಂದು ಬೆಳವಣಿಗೆ ನಡೆದ್ದಿದೆ. ಅಂಬರೀಶ್ ಅವರ ಆಪ್ತ ಮಾರಗೌಡನಹಳ್ಳಿ ಚಂದ್ರು ಜೆಡಿಎಸ್‌ ಗೆ ಸೇರ್ಪಡೆಯಾಗಿದ್ದಾರೆ. ಇದು ಕಾಂಗ್ರೆಸ್ ಗೆ ಬಿಗ್ ಶಾಕ್ ಎನ್ನಲಾಗಿದೆ.

ಮಾಜಿ ಸಚಿವ ಅಂಬರೀಶ್ ಅವರು ಜೆಡಿಎಸ್‌ ಪಕ್ಷ ಸೇರ್ಪಡೆಗೊಳ್ಳುತ್ತಾರೆ ಎಂಬ ವದಂತಿಗಳು ಹರಡುತ್ತಿರುವ ಬೆನ್ನಲ್ಲೇ ಅವರ ಬೆಂಬಲಿಗರು ಜೆಡಿಎಸ್‌ಗೆ ಸೇರ್ಪಡೆಗೊಂಡಿದ್ದಾರೆ. ಮಾರಗೌಡನಹಳ್ಳಿ ಚಂದ್ರು ಅವರು ಜಿಲ್ಲಾ ಕಾಂಗ್ರೆಸ್ ಮುಖಂಡರಾಗಿ ಗುರುತಿಸಿಕೊಂಡಿದ್ದರು ಅಷ್ಟೇ ಅಲ್ಲದೆಮಾಜಿ ಸಚಿವ ಅಂಬರೀಶ್ ಅವರ ಆಪ್ತ ಬೆಂಬಲಿಗ ಎಂದೇ ಗುರುತಿಸಿ ಕೊಂಡಿದ್ದಾರೆ. ಇದೀಗ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾಖಾನ್ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಜೆಡಿಎಸ್‌ಗೆ ಸೇರ್ಪಡೆಗೊಂಡ ಬಳಿಕ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ಶ್ರೀನಿವಾಸ್ ಅವರನ್ನು ಚುನಾವಣೆಯಲ್ಲಿ ಬೆಂಬಲಿಸುವುದಾಗಿ ಹೇಳಿದ್ದಾರೆ. ಇದು ಕಾಂಗ್ರೆಸ್ ಪಾಳಯಕ್ಕೆ ಮುಳುವಾಗಲಿದೆ ಎಂದು ಮೂಲಗಳು ತಿಳಿಸಿವೆ.

 

Edited By

Shruthi G

Reported By

hdk fans

Comments