A PHP Error was encountered

Severity: Warning

Message: session_start(): Failed to decode session object. Session has been destroyed

Filename: Session/Session.php

Line Number: 143

Backtrace:

File: /var/www/html/civicnews.in/public_html/application/third_party/MX/Loader.php
Line: 173
Function: _ci_load_library

File: /var/www/html/civicnews.in/public_html/application/third_party/MX/Loader.php
Line: 192
Function: library

File: /var/www/html/civicnews.in/public_html/application/third_party/MX/Loader.php
Line: 153
Function: libraries

File: /var/www/html/civicnews.in/public_html/application/third_party/MX/Loader.php
Line: 65
Function: initialize

File: /var/www/html/civicnews.in/public_html/application/modules/home/controllers/Home.php
Line: 7
Function: __construct

File: /var/www/html/civicnews.in/public_html/index.php
Line: 315
Function: require_once

ರೈತರ ಮೊಗದಲ್ಲಿ ಮಂದಹಾಸ ಮೂಡಿಸಲಿರುವ ರಾಜ್ಯ ಸರ್ಕಾರದ ಈ ಹೊಸ ಬಂಪರ್ ಯೋಜನೆಗಳು..!! | Civic News

ರೈತರ ಮೊಗದಲ್ಲಿ ಮಂದಹಾಸ ಮೂಡಿಸಲಿರುವ ರಾಜ್ಯ ಸರ್ಕಾರದ ಈ ಹೊಸ ಬಂಪರ್ ಯೋಜನೆಗಳು..!!

03 Jul 2018 1:21 PM |
4601 Report

ರೈತನ ಬಾಳಿನಲ್ಲಿ ಬೆಳಕು ತಂದು ಆತನ ಬದುಕಿನಲ್ಲಿ ಸಂತೃಪ್ತಿ ತರಲು ಸರ್ಕಾರ ಶೀಘ್ರದಲ್ಲಿಯೇ ಹೊಸ ಯೋಜನೆಗಳನ್ನು ರೂಪಿಸಲಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಪ್ರಕಟಿಸಿದ್ದಾರೆ.

ಜೆಡಿಎಸ್‌ ಮತ್ತು ಕಾಂಗ್ರೆಸ್‌ ನೇತೃತ್ವದ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಸೋಮವಾರ ವಿಧಾನಮಂಡಲದ ಮೊದಲ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು ಹೊಸ ಸರ್ಕಾರದ ಧ್ಯೇಯೋದ್ದೇಶಗಳನ್ನು ಹಾಗೂ ಆಶಯಗಳನ್ನು ಸೂಚ್ಯವಾಗಿ ವಿವರಿಸಿದರು. ವಿಶೇಷವಾಗಿ ರೈತ ಸಮುದಾಯದ ಬಗ್ಗೆ ಹೆಚ್ಚು ಪ್ರಸ್ತಾಪಿಸಿದ್ದು ಗಮನಾರ್ಹವಾಗಿತ್ತು. ರೈತರ ಬದುಕಿನಲ್ಲಿ ಸಂತೃಪ್ತಿ ತರಲು ಶೀಘ್ರ ಹೊಸ ಯೋಜನೆಗಳ ಜಾರಿ ಎನ್ನುವ ಮೂಲಕ ಸಾಲಮನ್ನಾ ಬಗ್ಗೆಯೂ ಸುಳಿವು ನೀಡಿದ್ದಾರೆ.

ರಾಜ್ಯದ ರೈತರು ಇಸ್ರೇಲ್‌ ಮಾದರಿಯ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು ಎಂಬುದು ಸರ್ಕಾರದ ಬಯಕೆ. ನೀರು ಲಭ್ಯತೆ ಆಧರಿಸಿ ಯಾವ ಋುತುಮಾನಕ್ಕೆ ಯಾವ ಬೆಳೆ ಬೆಳೆಯಬಹುದು ಎಂಬುದರ ಕುರಿತು ಸರ್ಕಾರದ ಅಧಿಕಾರಿಗಳು ರೈತರ ಜಮೀನಿಗೆ ಬಂದು ಸಲಹೆ ನೀಡುತ್ತಾರೆ. ನಾವು ನಮ್ಮ ಕೃಷಿ ಪದ್ಧತಿ ಹಾಗೂ ಕೃಷಿ ನೀತಿಯಲ್ಲಿ ಬದಲಾವಣೆಗಳನ್ನು ತರಬೇಕಾಗಿದೆ. ಅನ್ನದಾತನಿಗೆ ಅಧಿಕ ಆದಾಯ ಮತ್ತು ಹೆಚ್ಚು ಲಾಭ ದೊರಕಿಸಿಕೊಡಬೇಕಾದರೆ ತೋಟಗಾರಿಕಾ ಬೆಳೆಗಳಿಗೆ ಹೆಚ್ಚು ಒತ್ತು ನೀಡಬೇಕಾಗಿದೆ. ರಫ್ತು ಆಧಾರಿತ ದೃಷ್ಟಿಹೊತ್ತು ಮಾರುಕಟ್ಟೆ, ಪೊಟ್ಟಣೀಕರಣ ಹಾಗೂ ಸಂಗ್ರಹಣಾ ವ್ಯವಸ್ಥೆಯನ್ನು ರೂಪಿಸಬೇಕಾಗಿದೆ ಎಂದು ರಾಜ್ಯಪಾಲರು ಹೇಳಿದರು. ರೈತರಿಗೆ ನ್ಯಾಯಯುತ ಬೆಲೆ ಖಚಿತ ಪಡಿಸುವ ಮಾದರಿ ಹಾಗೂ ಪ್ರಾಯೋಗಿಕ ಯೋಜನೆಯನ್ನು ಇಡೀ ರಾಷ್ಟ್ರದಲ್ಲಿಯೇ ಪ್ರಪ್ರಥಮವಾಗಿ ಕರ್ನಾಟಕದಲ್ಲಿ ಜಾರಿಗೆ ತರಲು ನನ್ನ ಸರ್ಕಾರ ಉತ್ಸುಕವಾಗಿದೆ. ಆತಂಕದ ದಿನಗಳು ಇನ್ನಿಲ್ಲ. ಧ್ವನಿ ಇಲ್ಲದ ರೈತರಿಗೆ ಧ್ವನಿಯಾಗಬೇಕು ಎಂಬುದು ಸರ್ಕಾರದ ಆಶಯ. ಯಾವುದೇ ಕಾರಣಕ್ಕೂ ರೈತರು ಆತ್ಮಹತ್ಯೆಗೆ ಶರಣಾಗಬಾರದು ಎಂದು ಈ ಸದನದ ಮೂಲಕ ಮನವಿ ಮಾಡುತ್ತೇನೆ ಎಂದರು.

ಮೇವು ಭದ್ರತೆ ನೀತಿ ಜಾರಿ : ನೂತನ ಸರ್ಕಾರ ರಾಜ್ಯ ಮೇವು ಭದ್ರತಾ ನೀತಿ ರೂಪಿಸಲು ಮುಂದಾಗಿದೆ.

ವಿಧಾನಮಂಡಲದಲ್ಲಿ ಭಾಷಣ ಮಾಡಿದ ರಾಜ್ಯಪಾಲ ವಜುಭಾಯಿ ವಾಲಾ ಅವರು, ಕರ್ನಾಟಕವು ಹಾಲಿನ ಸಂಗ್ರಹಣೆಯಲ್ಲಿ ದೇಶದಲ್ಲೇ 2ನೇ ಸ್ಥಾನ ಹೊದಂದಿದೆ. ಮೊಟ್ಟೆಗಳ ಉತ್ಪಾದನೆಯಲ್ಲಿ 7ನೇ ಸ್ಥಾನ ಮತ್ತು ಮಾಂಸದ ಉತ್ಪಾದನೆಯಲ್ಲಿ 11ನೇ ಸ್ಥಾನ ಗಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಮೇವು ಭದ್ರತಾ ನೀತಿ ರೂಪಿಸಲಾಗುವುದು. ಅಲ್ಲದೆ, ಚರ್ಮ ಸಂಸ್ಕರಣೆ ಮತ್ತು ಹದ ಮಾಡುವ ಕೇಂದ್ರ ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ರಾಜ್ಯದ ಕೆರೆಗಳ ಭರ್ತಿ : ಕೆರೆಗಳನ್ನು ಭರ್ತಿ ಮಾಡುವ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ರಾಜ್ಯಪಾಲ ವಜುಭಾಯಿ ವಾಲಾ ತಿಳಿಸಿದ್ದಾರೆ.

ಸರ್ಕಾರವು ಹೆಚ್ಚುವರಿ ನೀರಾವರಿ ಸಾಮರ್ಥ್ಯ ಕಲ್ಪಿಸಲು ನಿರ್ದಿಷ್ಟಯೋಜನೆ ರೂಪಿಸಲಿದೆ. ಕಿರು ನೀರಾವರಿ ವ್ಯವಸ್ಥೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಕೈಗೆತ್ತಿಕೊಳ್ಳಲಾಗುವುದು. ಕಾಲುವೆಗಳಲ್ಲಿ ನೀರಿನ ಹರಿವನ್ನು ಮಾಪನ ಮಾಡಲು ಮೇಲ್ವಿಚಾರಣಾ ನಿಯಂತ್ರಣ ಮತ್ತು ದತ್ತಾಂಶ ಆರ್ಜನೆ (ಎಸ್‌ಸಿಎಡಿಎ) ತಂತ್ರಜ್ಞಾನ ಅಳವಡಿಸಿಕೊಳ್ಳಲಾಗುವುದು ಎಂದು ಹೇಳಿದರು.

Edited By

Shruthi G

Reported By

hdk fans

Comments