ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್ ಕೊಟ್ಟ ಸಚಿವ ಎಚ್.ಡಿ.ರೇವಣ್ಣ

04 Jul 2018 10:12 AM |
38017 Report

ಹಾಸನದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಬಸ್ ಸಂಚಾರವನ್ನು ಆರಂಬಿಸಲಾಗಿದೆ. ಈ ಒಂದು ಯೋಜನೆ ರಾಜ್ಯದಲ್ಲೇ ಮೊದಲ ಬಾರಿಗೆ ಕಾಲೇಜು ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಬಸ್ ಸಂಚಾರವನ್ನು ಆರಂಭಿಸಲಾಗಿದ್ದು ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕಾಗಿದೆ.

ಈ ಯೋಜನೆಯನ್ನು ಹಾಸನದಲ್ಲಿ ಜಾರಿಗೆ ತಂದಿದ್ದು, ಪ್ರತ್ಯೇಕವಾಗಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಈ ಯೋಜನೆಯನ್ನು ರೂಪಿಸಲಾಗಿದೆ. ಇದರ ಬಳಕೆಯನ್ನು ಹಾಸನದ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು. ಸಚಿವ ಎಚ್.ಡಿ.ರೇವಣ್ಣನವರ ಕನಸಿನ ಯೋಜನೆಯಾಗಿದೆ, ಗ್ರಾಮೀಣ ಪ್ರದೇಶಗಳಿಂದ ಬರುವಂತ ವಿದ್ಯಾರ್ಥಿಗಳಿಗೆ ಉಪಯೋಗವಾಗಲಿ ಅನ್ನೋ ಕಾರಣಕ್ಕೆ ಈ ಯೋಜನೆಯನ್ನು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಅವರಿಗೆ ಪ್ರಸ್ತಾಪ ಸಲ್ಲಿಸಿ ಯೋಜನೆ ಅನುಷ್ಠಾನಗೊಳಿಸಿದ್ದಾರೆ.

Edited By

Shruthi G

Reported By

hdk fans

Comments