ಬಿಗ್ ಬ್ರೇಕಿಂಗ್ : ಲೋಕಸಭಾ ಚುನಾವಣೆ ಹಿನ್ನಲೆ ರಾಜಕೀಯ ವಲಯದಲ್ಲಿ ಅಚ್ಚರಿ ಬೆಳವಣಿಗೆ..! 'ಕೈ' ಪಾಳಯಕ್ಕೆ ಬಿಗ್ ಶಾಕ್..!!

01 Aug 2018 5:51 PM |
4003 Report

ಲೋಕಸಭಾ ಸ್ಥಾನವು ಸಿ.ಎಸ್​. ಪುಟ್ಟರಾಜು ಅವರ ರಾಜೀನಾಮೆಯಿಂದ ತೆರವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ​ ಅವರನ್ನು ಕಣಕ್ಕಿಳಿಸಬೇಕು ಎಂದು ಎಚ್​.ಡಿ. ದೇವೇಗೌಡ ಅವರಿಗೆ ಮಂಡ್ಯದ ಜೆಡಿಎಸ್ ನಾಯಕರುಗಳು ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಮೊದಲು ಲೋಕಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಪ್ರಜ್ವಲ್​ ಅವರನ್ನು ಕಣಕ್ಕಿಳಿಸುವ ಇಂಗಿತವನ್ನು ಜೆಡಿಎಸ್​ ವರಿಷ್ಠ ಎಚ್​.ಡಿ. ದೇವೇಗೌಡ ಅವರು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದರು. ಇದಲ್ಲದೇ ಲೋಕಸಬಾ ಚುನಾವಣೆಯಲ್ಲೂ ಕೂಡ ದೇವೇಗೌಡ್ರು ಸ್ಪರ್ಧೆ ಮಾಡದೇ ಇರುವುದರ ಬಗ್ಗೆ ಸುದ್ದಿಯೊಂದು ಹರಿದಾಡುತಿತ್ತು. ಈ ನಡುವೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ದೇವೇಗೌಡ್ರು ಮತ್ತೆ ಹಾಸನ ಲೋಕಸಭಾ ಕ್ಷೇತ್ರದಿದ ಸ್ಪರ್ಧೆ ಮಾಡಲು ನಿರ್ಧಾರಮಾಡಿದ್ದು, ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣನವರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಲು ಅವಕಾಶ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.

Edited By

Shruthi G

Reported By

hdk fans

Comments