ಇಂದು ಬಾಜಪ ಕಾರ್ಯಕರ್ತರ ಸಭೆ 10-30 ಕ್ಕೆ ಸಂಘದ ಕಛೇರಿಯಲ್ಲಿ

04 Aug 2018 5:17 AM |
360 Report

ಭಾರತೀಯ ಜನತಾ ಪಾರ್ಟಿಯ ವತಿಯಿಂದ ದಿನಾಂಕ:-11-08-2018 ರಂದು ನಗರದ ಬಸವಭವನದಲ್ಲಿ ನೂತನವಾಗಿ ರಾಜ್ಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಶ್ರೀ ವಿಜಯೇಂದ್ರ ಯಡಿಯೂರಪ್ಪರವರಿಗೆ ಹಾಗೂ ವಿಧಾನಪರಿಷತ್ ಗೆ ಆಯ್ಕೆಯಾಗಿರುವ ಅ.ದೇವೇಗೌಡರವರು, ಶ್ರೀಮತಿ ತೇಜಸ್ವಿನಿ ರಮೇಶ್ ರವರಿಗೆ ಅಭಿನಂದನಾ ಸಮಾರಂಭವನ್ನು ಅಯೋಜಿಸಲಾಗಿದ್ದು. ಈ ಕಾರ್ಯಕ್ರಮದ ಕುರಿತು ಚರ್ಚಿಸಲು ಇಂದು ಬೆಳಿಗ್ಗೆ 10:30 ಗಂಟೆಗೆ ಸರಿಯಾಗಿ ದೊಡ್ಡಬಳ್ಳಾಪುರ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ ಈ ಸಭೆಗೆ ತಾಲ್ಲೂಕು ಹಾಗೂ ನಗರದ ಎಲ್ಲಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು ಹಾಗೂ ಎಲ್ಲಾ ಮೋರ್ಚಾದ ಅಧ್ಯಕ್ಷರುಗಳು, ಪ್ರಧಾನ ಕಾರ್ಯದರ್ಶಿಗಳು, ಎಲ್ಲಾ ಬೂತ್ ನ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಸದಸ್ಯರುಗಳು ಕಾರ್ಯಕರ್ತ ಬಂಧುಗಳು ತಪ್ಪದೇ ಸಭೆಗೆ ಹಾಜರಾಗಬೇಕೆಂದು ಬೆಂ.ಗ್ರಾ.ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಹೆಚ್.ಎಸ್.ಶಿವಶಂಕರ್ ಕೋರಿದ್ದಾರೆ.

Edited By

Ramesh

Reported By

Ramesh

Comments