ಬಿಜೆಪಿಯ 3 ಮಾಜಿ ಮುಖ್ಯಮಂತ್ರಿಗಳ ಬಗ್ಗೆ ಎಚ್ ಡಿ ಕೆ ಹೇಳಿದ್ದೇನು..??

04 Sep 2018 12:23 PM |
4194 Report

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ ಉತ್ತರ ಕರ್ನಾಟಕಕ್ಕೆ ನಾನು ಭೇಟಿ ನೀಡಿಲ್ಲ ಎಂಬುದಾಗಿ ಬಿಜೆಪಿ ನಾಯಕರು ಏನೇನೋ ಹೇಳುತ್ತಿದ್ದಾರೆ. ಅವರೆಲ್ಲ ಮುಖ್ಯಮಂತ್ರಿ ಯಾಗಿದಾಗ ಮೊದಲ 100 ದಿನಗಲ್ಲಿ ಬಿಜೆಪಿ ಪಕ್ಷದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಹಾಗೂ ಡಿ.ವಿ.ಸದಾನಂದಗೌಡರು ಯಾವ್ಯಾವ ಜಿಲ್ಲೆಗಳಿಗೆ ಹೋಗಿದ್ದರು ಎಂಬುದರ ಕುರಿತು ದಾಖಲೆ ಸಮೇತ ಹೇಳುತ್ತೇನೆ ಎಂದು ತೀಕ್ಷ್ಣವಾಗಿ ಹೇಳಿದ್ದಾರೆ.

ರಾಜ್ಯದ ಆರ್ಥಿಕ ಸ್ಥಿತಿಗತಿ ಕುರಿತು ಶ್ವೇತಪತ್ರ ಹೊರಡಿಸುವಂತೆ ವಿರೋಧ ಪಕ್ಷದ ನಾಯಕ ಯಡಿಯೂರಪ್ಪ ಒತ್ತಾಯಿಸಿದ್ದಾರೆ. ರಾಜ್ಯದ ಪ್ರಗತಿ ಕುರಿತು ಬಿಜೆಪಿ ನಾಯಕರಿಗೆ ಶ್ವೇತ ಪತ್ರವೇಕೆ, ಕೇಸರಿ ಬಣ್ಣ ಬಯಸಿದರೂ ಆ ಬಣ್ಣದಲ್ಲೇ ಬೇಕಾದರೆ ಮಾಹಿತಿ ಕೊಡುತ್ತೇನೆ ಎಂದು ವ್ಯಂಗ್ಯವಾಗಿ ಹೇಳಿದ ಎಚ್ ಡಿ ಕೆ ನಮ್ಮ ಮೈತ್ರಿ ಸರ್ಕಾರದ 100 ದಿನಗಳ ಆಡಳಿತಕ್ಕೆ ಜನರು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರೆ.

Edited By

hdk fans

Reported By

hdk fans

Comments