ಸಿಎಂ ಕುಮಾರಸ್ವಾಮಿ ತೆಗೆದುಕೊಂಡ್ರು ಮಹತ್ವದ ನಿರ್ಧಾರ..!

26 Oct 2018 11:49 AM |
972 Report

ಸಿಎಂ ಕುಮಾರಸ್ವಾಮಿಯವರು ಮತ್ತೊಮ್ಮೆ ಜನ ಮೆಚ್ಚುವ ಕೆಲಸ ಮಾಡಿದ್ದಾರೆ. ನವೆಂಬರ್ 1 ರಿಂದ ಎಲ್ಲಾ ಕಡತಗಳಲ್ಲೂ ಕನ್ನಡ ಬಳಕೆ ಕಡ್ಡಾಯವಾಗಿರಬೇಕು ಎಂದು ಸಿಎಂ ಕುಮಾರಸ್ವಾಮಿಯವರು ಸೂಚನೆ ನೀಡಿದ್ದಾರೆ. ಸಿಎಂ ಕುಮಾರಸ್ವಾಮಿ ಅವರು ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಗೆ ಈ ಬಗ್ಗೆ ಸೂಚನೆಯನ್ನು ನೀಡಿದ್ದಾರೆ,

ಕನ್ನಡದಲ್ಲಿರುವ ಕಡತಗಳಿಗೆ ಮಾತ್ರ ಸಹಿ ಮಾಡುವುದಾಗಿ ಸಿಎಂ ಕುಮಾರಸ್ವಾಮಿಯವರು ಹೇಳಿದ್ದಾರೆ. ನವೆಂಬರ್ 1 ರಿಂದ ಎಲ್ಲಾ ಸರ್ಕಾರಿ ಕಡತ ಕನ್ನಡಮಯವಾಗಲಿದ್ದು. ಈ ಸಂಬಂಧ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ. ಯಾವುದೇ ಆಡಳತ ಕಚೇರಿಗಳಿಂದ ಸಿಎಂ ಕಚೇರಿಗೆ ಬರುವ ಕಡತಗಳು ಕನ್ನಡದಲ್ಲೇ ಇರಬೇಕು. ಇಂಗ್ಲೀಷ್ ಕಡತಗಳನ್ನು ಸ್ವೀಕರಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ನೀಡಿದ್ದಾರೆ.

Edited By

hdk fans

Reported By

hdk fans

Comments